ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನದ ಸ್ನಾನ ಘಟ್ಟ ಲೋಕಾರ್ಪಣೆ: ಸ್ವರ್ಣಾ ನದಿಗೆ ಬಾಗಿನ ಅರ್ಪಿಸಿದ ಯಶ್ಪಾಲ್ ಸುವರ್ಣ

ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟವು ಹಲವು ವರ್ಷಗಳಿಂದ ನದಿ ಕೊರೆತದಿಂದ ಹಾನಿಗೊಳಗಾಗಿತ್ತು. ಪ್ರತಿವರ್ಷ ಕೃಷ್ಣಾಂಗಾರಕ ಚತುರ್ದಶಿಯ ಸಂದರ್ಭದಲ್ಲಿ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ತೀರ್ಥಸ್ನಾನಕ್ಕಾಗಿ ದೇವಸ್ಥಾನಕ್ಕೆ ಆಗಮಿಸುತ್ತಿದ್ದು, ಸೂಕ್ತ ಮೂಲಸೌಕರ್ಯದ ಕೊರತೆಯಿಂದಾಗಿ ಭಕ್ತರಿಗೆ ಸಾಕಷ್ಟು ತೊಂದರೆ ಎದುರಾಗುತ್ತಿತ್ತು. ಮೂಡು ಪೆರಂಪಳ್ಳಿ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ಆವರಣದಲ್ಲಿ ₹2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ನೂತನ ನದಿ ಸ್ನಾನ ಘಟ್ಟವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಸ್ವರ್ಣಾ ನದಿಗೆ ಬಾಗಿನ […]
