ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ: ಡಿವೈಡರ್‌ಗೆ ಡಿಕ್ಕಿ, ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್)ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಕೆ.ಎಫ್.ಸಿ. ಸಮೀಪ ಗುರುವಾರ ನಡೆದಿದೆ. ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದ್ದು, ಅಪಘಾತದ ವೇಳೆ ಬಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆ ಸಂಭವಿಸಿದ ಪರಿಣಾಮ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಬಸ್ ಹಾಗೂ ರಸ್ತೆ ವಿಭಾಜಕಕ್ಕೆ ಹಾನಿಯಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಣಿಪಾಲ ಪೊಲೀಸರು ಸ್ಥಳಕ್ಕೆ […]

ಜೂ.28: ಉಡುಪಿ ಯಕ್ಷಗಾನ ಕಲಾರಂಗದಿಂದ ‘ಸೂರು ನೂರರ ಸಡಗರ’

  ಉಡುಪಿ ಯಕ್ಷಗಾನ ಕಲಾರಂಗದ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ 100ರ ಮನೆ ಹಸ್ತಾಂತರ ಹಾಗೂ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಜೂ. 28ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಉಡುಪಿ ಯಕ್ಷಗಾನ ಕಲಾರಂಗವು ಕಳೆದ 26 ವರ್ಷಗಳಿಂದ ಯಕ್ಷನಿಧಿಯ ಮೂಲಕ ಕಲಾವಿದರ ಕಲ್ಯಾಣಕ್ಕಾಗಿ ಹಾಗೂ 22 ವರ್ಷಗಳಿಂದ ವಿದ್ಯಾಪೋಷಕ್ ಯೋಜನೆಯಡಿ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸೇರಿದಂತೆ […]

ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಪ್ರಧಾನಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿಯಾಗಿ 4400 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಗುರುವಾರ ಕಟಪಾಡಿಯ ವಿಶ್ವನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಇದೇ […]

ಪುತ್ತೂರು: ಯುವತಿಗೆ ವಂಚನೆ ಪ್ರಕರಣ: ರಾಜೀ ಸಂಧಾನಕ್ಕೆ ಹಾಜರಾಗಲು ಆರೋಪಿ ಕೃಷ್ಣ ರಾವ್ ಗೆ ಹೈಕೋರ್ಟ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾಪವನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಗೆ ತಡೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಬುಧವಾರ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ನಡೆಯಿತು. ವಿಚಾರಣೆ ವೇಳೆ ಆರೋಪಿ ಪರ ಹಾಜರಾಗಿದ್ದ […]

© 2026 ನಮ್ಮ ವರ್ತಮಾನ :: copyright all right reserved.