ಉಡುಪಿ ಶ್ರೀಕೃಷ್ಣ ಮಠದಲ್ಲಿ ಎಸ್ಐಆರ್ ಅಭಿಯಾನಕ್ಕೆ ಚಾಲನೆ

ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ಎಸ್ಐಆರ್ (SIR) ಅಭಿಯಾನಕ್ಕೆ ವಿಧಿವತ್ತಾಗಿ ಚಾಲನೆ ನೀಡಲಾಯಿತು. ಅಭಿಯಾನವು ಯಶಸ್ವಿಯಾಗಿ ನಡೆಯಲೆಂದು ಶ್ರೀಪಾದರು ಆಶೀರ್ವಚನ ನೀಡಿದರು. ಎಸ್ಐಆರ್ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ಸಂಬಂಧಿತ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದರು. ಸಮಾಜದ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸಕ್ರಿಯವಾಗಿ […]
ಜು.4: ಉಡುಪಿ ತುಳುಕೂಟದಿಂದ ‘ಮದೆರೆಂಗಿದರಂಗ್’ ಕಾರ್ಯಕ್ರಮ

ತುಳು ಬದುಕಿನ ವೈಶಿಷ್ಟ್ಯಗಳು, ಸಂಪ್ರದಾಯಗಳು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಉಡುಪಿ ತುಳುಕೂಟದ ಪ್ರಾಯೋಜಕತ್ವದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಮದೆರೆಂಗಿದರಂಗ್’ ಕಾರ್ಯಕ್ರಮವು ಜುಲೈ 4ರಂದು ಉಡುಪಿ ಬಡಗಬೆಟ್ಟು ಸೊಸೈಟಿಯ ಮೇಲ್ಭಾಗದಲ್ಲಿರುವ ಜಗನ್ನಾಥ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಪ್ರದಾಯಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಎಲೆಯಿಂದ ಪೀಂಪಿರಿ ಊದುವ ಸ್ಪರ್ಧೆ, ಹಲಸಿನ ಬೀಜದ ಸಿಪ್ಪೆ ತೆಗೆಯುವ ಸ್ಪರ್ಧೆ […]
ಉಡುಪಿಯಲ್ಲಿ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೇ ಪಲ್ಸ್ ಪೋಲಿಯೋ […]
ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯ ಶವ ಪತ್ತೆ

ಉಡುಪಿಯ ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಯಾಜ್ ಅವರು ನದಿಯ ಬಳಿ ಇದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ […]
ಜು.11ರಂದು ಉಡುಪಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್: 2 ಸಾವಿರ ಪ್ರಕರಣಗಳ ಇತ್ಯರ್ಥ ಗುರಿ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜುಲೈ 11ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದೆ. ಈ ಲೋಕ ಅದಾಲತ್ನಲ್ಲಿ ಕನಿಷ್ಠ 2,000 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ರಾವ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 34,856 […]
ಉಡುಪಿ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ; ಪೊಲೀಸರು, ಶ್ವಾನದಳದಿಂದ ಪರಿಶೀಲನೆ

ಉಡುಪಿ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ನ್ಯಾಯಾಲಯದ ಆಡಳಿತಕ್ಕೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಠಾಣೆಯ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ನ್ಯಾಯಾಲಯದ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅನುಮಾನಾಸ್ಪದ ವಸ್ತುಗಳಿಗಾಗಿ ಸಂಪೂರ್ಣ ಪರಿಶೀಲನೆ ಕೈಗೊಳ್ಳಲಾಗಿದೆ. ಗಮನಾರ್ಹವಾಗಿ, ಕೇವಲ ಐದು ದಿನಗಳ ಹಿಂದೆಯೂ “ಸಹನಾ” ಎಂಬ ಹೆಸರಿನ ಇಮೇಲ್ ಐಡಿಯಿಂದ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಆ ವೇಳೆ […]
ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕನ ಬಂಧನ: 1.52ಲಕ್ಷದ ಸೊತ್ತು ವಶ

ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲದ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಮಾಡುತ್ತಿದ್ದ ಆರೋಪದಡಿ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ ಹಾಗೂ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ಮೂಲದ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂಬಾತನನ್ನು ಬಂಧಿಸಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆ […]
ಉಡುಪಿ ಜಿಲ್ಲೆಯಲ್ಲಿ ವಶಪಡಿಸಿಕೊಂಡಿದ್ದ 36.29 ಲಕ್ಷ ರೂ. ಮೌಲ್ಯದ 73 ಕೆಜಿ ಗಾಂಜಾ ನಾಶ

ಮಾದಕ ವಸ್ತುಗಳ ಅಕ್ರಮ ಸಾಗಣೆ ಹಾಗೂ ಮಾರಾಟದ ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮದ ಭಾಗವಾಗಿ, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ, ಅಂದಾಜು 36,29,550 ರೂ. ಮೌಲ್ಯದ ಗಾಂಜಾವನ್ನು ಕಾನೂನುಬದ್ಧವಾಗಿ ನಾಶಪಡಿಸಲಾಯಿತು. ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಮೇಲ್ವಿಚಾರಣೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಮೆ. ಆಯುಷ್ ಎನ್ವಿರೋಟೆಕ್ ಪ್ರೈ.ಲಿ. […]
ಉಡುಪಿ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಪ್ರತಿಷ್ಠಿತ DG & IGP Commendation Disc ಪ್ರಶಸ್ತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 2025–2026ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಕಮೆಂಡೇಶನ್ ಡಿಸ್ಕ್ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯ ಎ.ಎಸೈ ರಾಜೇಶ್ ಪಿ., ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ARSI ಸುಧಾಕರ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ನಾಗರಾಜ್ ಪ್ರಭು ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಶಿವಕುಮಾರ್ ಎಚ್. ಎಂ. ಪ್ರಶ್ಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ತವ್ಯದ ಮೇಲಿನ ನಿಷ್ಠೆ, […]
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶ್ವಾಸಕೋಶ ಕ್ಯಾನ್ಸರ್ ಗೆ ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆ – Copy
ಆರೋಗ್ಯ ಕ್ಷೇತ್ರದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಅತ್ಯಂತ ಸಂಕೀರ್ಣ ಮತ್ತು ಅಪರೂಪದ ಶ್ವಾಸನಾಳ ಕ್ಯಾನ್ಸರ್ಗೆ ಸಂಬಂಧಿಸಿದ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಡಿಮೆ ನೋವು, ವೇಗವಾದ ಚೇತರಿಕೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ನಡೆದ ಈ ಶಸ್ತ್ರಚಿಕಿತ್ಸೆ ಇದೀಗ ರಾಜ್ಯದ ಗಮನ ಸೆಳೆದಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 36 ವರ್ಷದ ವ್ಯಕ್ತಿಯ ಶ್ವಾಸನಾಳದ ಕೆಳಭಾಗದಲ್ಲಿ ಕ್ಯಾನ್ಸರ್ ಗೆಡ್ಡೆ ಇರುವುದನ್ನು ಎಂಡೋಸ್ಕೋಪಿ ಪರೀಕ್ಷೆಯಲ್ಲಿ ಪತ್ತೆ […]
